Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:31 - ಪರಿಶುದ್ದ ಬೈಬಲ್‌

31 ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನಿಗೆ ‘ನೀನು ದುರ್ಮಾರ್ಗಿ’ ಎಂದು ಮುಖಾಮುಖಿಯಾಗಿ ಹೇಳಿದವರಾರು? ಅವನು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿತೀರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನ ಮುಯ್ಯಿಗೆ ಮುಯ್ಯಿ ತೀರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:31
15 ತಿಳಿವುಗಳ ಹೋಲಿಕೆ  

ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.


ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ಯೋಹಾನನು ಹೆರೋದನಿಗೆ, “ನೀನು ನಿನ್ನ ಅಣ್ಣನ ಪತ್ನಿಯನ್ನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದನು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.


‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.


ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.


ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ ಅವನ ಸಮಾಧಿಯ ಸಮೀಪದಲ್ಲಿ ಕಾವಲುಗಾರರು ನಿಂತುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು