Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:13 - ಪರಿಶುದ್ದ ಬೈಬಲ್‌

13 ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:13
15 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.


ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ?


ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು