Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:23 - ಪರಿಶುದ್ದ ಬೈಬಲ್‌

23 ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:23
20 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು