Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:9 - ಪರಿಶುದ್ದ ಬೈಬಲ್‌

9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:9
20 ತಿಳಿವುಗಳ ಹೋಲಿಕೆ  

ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು.


ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.


ಯಾಕೆಂದರೆ ದುಷ್ಟರು ನಾಶವಾಗುವರು. ನೀತಿವಂತರನ್ನಾದರೋ ಯೆಹೋವನು ಪರಿಪಾಲಿಸುವನು.


ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.


ಮೋವಾಬಿನ ಬಲವನ್ನು ಕತ್ತರಿಸಲಾಗಿದೆ. ಅದರ ತೋಳನ್ನು ಮುರಿಯಲಾಗಿದೆ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು