Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:10 - ಪರಿಶುದ್ದ ಬೈಬಲ್‌

10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:10
32 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು.


ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ, ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.


ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?


ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು.


ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ.


ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದುಹಾಕು. ಅವರನ್ನು ವಧೆಯ ದಿನಕ್ಕೆಂದು ಆರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು