Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:13 - ಪರಿಶುದ್ದ ಬೈಬಲ್‌

13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:13
26 ತಿಳಿವುಗಳ ಹೋಲಿಕೆ  

ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.


ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.


ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.


ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.


ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.


ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?


ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು