Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:15 - ಪರಿಶುದ್ದ ಬೈಬಲ್‌

15 ವ್ಯಭಿಚಾರಿಯು ರಾತ್ರಿಗಾಗಿಯೇ ಕಾಯುತ್ತಿರುತ್ತಾನೆ. ‘ಯಾರ ಕಣ್ಣಿಗೂ ಬೀಳಬಾರದು’ ಎಂದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವ್ಯಭಿಚಾರಿ ಸಂಜೆಯನೇ ಎದುರು ನೋಡುತ್ತಿರುತ್ತಾನೆ ಯಾರೂ ತನ್ನನ್ನು ಕಾಣದಂತೆ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜಾರನು ತಾನು ಯಾರ ಕಣ್ಣಿಗೂ ಬೀಳಬಾರದೆಂದು ಸಂಜೆಯನ್ನೆದುರುನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:15
15 ತಿಳಿವುಗಳ ಹೋಲಿಕೆ  

ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.


ನೀನು ಬತ್ಷೆಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು’” ಎಂದು ಹೇಳಿದನು.


“ನೀವು ವ್ಯಭಿಚಾರ ಮಾಡಬಾರದು.


“ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ,


ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು