Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:20 - ಪರಿಶುದ್ದ ಬೈಬಲ್‌

20 ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವದು; ಹುಳವು ಅವನ ಹೆಣವನ್ನು ರುಚಿಯಿಂದ ತಿನ್ನುವದು; ಇನ್ನು ಮೇಲೆ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:20
14 ತಿಳಿವುಗಳ ಹೋಲಿಕೆ  

ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.


ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.


ನನ್ನ ಚರ್ಮವು ನಾಶವಾದ ಮೇಲೆಯೂ ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.


ನಾನು ಸಮಾಧಿಗೆ, ‘ನೀನೇ ನನ್ನ ತಂದೆ’ಯೆಂದು ಹುಳವಿಗೆ, ‘ನೀನೇ ನನ್ನ ತಾಯಿ, ನೀನೇ ನನ್ನ ತಂಗಿ’ ಎಂದು ಹೇಳುವುದಾದರೆ,


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.


ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.


ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.


ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು