Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:4 - ಪರಿಶುದ್ದ ಬೈಬಲ್‌

4 ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:4
22 ತಿಳಿವುಗಳ ಹೋಲಿಕೆ  

ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


“ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.


ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.


ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.


ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾಗಲೆಲ್ಲಾ


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು