Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:11 - ಪರಿಶುದ್ದ ಬೈಬಲ್‌

11 ದೇವರು ಗದರಿಸುವಾಗ ಆಕಾಶಮಂಡಲದ ಸ್ತಂಭಗಳು ಭಯದಿಂದ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕಾಶಮಂಡಲದ ಸ್ತಂಭಗಳು ಆತನ ಗದರಿಕೆಯಿಂದ ಬೆರಗಾಗಿ ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:11
12 ತಿಳಿವುಗಳ ಹೋಲಿಕೆ  

ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ದೇವರು ತನ್ನ ದೂತರುಗಳನ್ನು ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!


ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ.


ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು.


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು