Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:17 - ಪರಿಶುದ್ದ ಬೈಬಲ್‌

17 ಆ ಬಟ್ಟೆಗಳನ್ನು ನೀತಿವಂತರು ಧರಿಸಿಕೊಳ್ಳುವರು; ಅವನ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:17
10 ತಿಳಿವುಗಳ ಹೋಲಿಕೆ  

ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.


ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ.


ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.


ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.


ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ


ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.


ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು