Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:20 - ಪರಿಶುದ್ದ ಬೈಬಲ್‌

20 ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:20
17 ತಿಳಿವುಗಳ ಹೋಲಿಕೆ  

ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


“ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.


ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.


ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.


ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.


ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು