Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:23 - ಪರಿಶುದ್ದ ಬೈಬಲ್‌

23 ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀ ಹಾಕಿ ಆಚೆಗೆ ಹೊರಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:23
15 ತಿಳಿವುಗಳ ಹೋಲಿಕೆ  

ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.


ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.


ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.


ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.


ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.


“ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ.


ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು.


ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.


ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು