Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:5 - ಪರಿಶುದ್ದ ಬೈಬಲ್‌

5 ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನ್ಯಾಯವಂತರೆಂದು ನಾನು ಒಪ್ಪುವದು ದೂರವಾಗಿರಲಿ, ಸಾಯುವ ತನಕ ನನ್ನ ಯಥಾರ್ಥತ್ವದ ಹೆಸರನ್ನು ಕಳಕೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:5
17 ತಿಳಿವುಗಳ ಹೋಲಿಕೆ  

ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.


ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ, ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು