Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:8 - ಪರಿಶುದ್ದ ಬೈಬಲ್‌

8 ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:8
19 ತಿಳಿವುಗಳ ಹೋಲಿಕೆ  

ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.


ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.


ಯಾಕೆಂದರೆ ದೇವರಿಲ್ಲದ ಜನರು ಫಲ ಕೊಡಲಾರರು. ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ.


ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕೆಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.


ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.


ನನ್ನ ವೈರಿಗಳಿಗೆ ದುಷ್ಟರ ಗತಿಯಾಗಲಿ. ನನ್ನ ವಿರೋಧಿಗಳಿಗೆ ಅನೀತಿವಂತರ ಗತಿಯಾಗಲಿ.


ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು