Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:16 - ಪರಿಶುದ್ದ ಬೈಬಲ್‌

16 ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:16
19 ತಿಳಿವುಗಳ ಹೋಲಿಕೆ  

ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.


ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು.


ನಿರ್ಗತಿಕರನ್ನು ಸ್ಥಳದಿಂದ ಸ್ಥಳಕ್ಕೆ ಅಲೆದಾಡಿಸುವರು. ಬಡವರು ಈ ದುಷ್ಟರಿಗೆ ಹೆದರಿ ಅಡಗಿಕೊಳ್ಳುವರು.


ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.


ನೀವು ದೇವರ ಪ್ರಿಯ ಮಕ್ಕಳಾಗಿದ್ದೀರಿ; ಆದ್ದರಿಂದ ನೀವು ಆತನನ್ನು ಅನುಸರಿಸಬೇಕು.


ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,


ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಯೋಬನೇ, ನೀನು ಅನೇಕರಿಗೆ ಉಪದೇಶಿಸಿರುವೆ. ನೀನು ಬಲಹೀನನ ಕೈಗಳಿಗೆ ಶಕ್ತಿಯನ್ನು ಕೊಟ್ಟಿರುವೆ;


ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.


ಯೋಸೇಫನ ಧಣಿಯು ತನ್ನ ಹೆಂಡತಿಯ ಮಾತು ಕೇಳಿ ತುಂಬ ಕೋಪಗೊಂಡನು.


ಆಗ ರಾಜನು ಆ ಸ್ತ್ರೀಗೆ, “ಮನೆಗೆ ಹಿಂದಿರುಗು. ನಾನು ನಿನ್ನ ವಿಷಯದಲ್ಲಿ ಆಜ್ಞೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.


ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು