Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:13 - ಪರಿಶುದ್ದ ಬೈಬಲ್‌

13 ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:13
22 ತಿಳಿವುಗಳ ಹೋಲಿಕೆ  

ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.


ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು.


ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.


“ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,


ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!’”


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಕೊಟ್ಟದ್ದೇಕೆ?


ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.


ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ.


“ಯಾಕೆಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ ಇನ್ನು ಕೆಲವೇ ವರ್ಷಗಳಲ್ಲಿ ಹೊರಟುಹೋಗುವೆನು.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.


ಬರಗಾಲವೂ ಬಿಸಿಲೂ ಹಿಮದ ನೀರನ್ನು ಹೀರುವಂತೆ ಪಾತಾಳವು ದುಷ್ಟರನ್ನು ಎಳೆದುಕೊಳ್ಳುವುದು.


ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತುಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.


“ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ.


ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ; ಮರಣವು ಆತನಿಗೆ ಮರೆಯಾಗಿಲ್ಲ.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು