Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:14 - ಪರಿಶುದ್ದ ಬೈಬಲ್‌

14 ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ ಮಂತ್ರಿಗಳೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:14
17 ತಿಳಿವುಗಳ ಹೋಲಿಕೆ  

ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು. ಹಾಳುದಿಬ್ಬಗಳಾಗಬೇಕೆಂಬುದೇ ಆ ಮನೆಗಳ ಗತಿಯಾಗಿದೆ.


ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.


ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.


ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು.


ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು