Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:17 - ಪರಿಶುದ್ದ ಬೈಬಲ್‌

17 ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:17
16 ತಿಳಿವುಗಳ ಹೋಲಿಕೆ  

ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದುಹೋಗುತ್ತೇವೋ?”


ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.


ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


(ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)


ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.


ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.


ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ಧ್ವನಿಯು ಅವರಿಗೆ ಕೇಳಿಸುವುದಿಲ್ಲ.


ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು.


ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು