Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:23 - ಪರಿಶುದ್ದ ಬೈಬಲ್‌

23 ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:23
12 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.


ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.


‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ.


ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!


“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು