Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:17 - ಪರಿಶುದ್ದ ಬೈಬಲ್‌

17 ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶ ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ ನಾನೇ ಒಂಟಿಗನಾಗಿ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:17
16 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆಹೋಗಿರಬಹುದು.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದ್ದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.


ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.


ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು.


ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.


ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು