Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:21 - ಪರಿಶುದ್ದ ಬೈಬಲ್‌

21 ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:21
13 ತಿಳಿವುಗಳ ಹೋಲಿಕೆ  

ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು.


ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.


ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.


“ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.


ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶ ಕೊಟ್ಟಿಲ್ಲ.


ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.


“ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು