Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:27 - ಪರಿಶುದ್ದ ಬೈಬಲ್‌

27 ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:27
12 ತಿಳಿವುಗಳ ಹೋಲಿಕೆ  

ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


“ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.


ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ.


ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು