Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:3 - ಪರಿಶುದ್ದ ಬೈಬಲ್‌

3 ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅನ್ಯಾಯಗಾರರಿಗೆ ವಿಪತ್ತನ್ನೂ ಕೆಡುಕರಿಗೆ ಉಪದ್ರವವನ್ನೂ ಕೊಡುವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:3
21 ತಿಳಿವುಗಳ ಹೋಲಿಕೆ  

ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.


“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.


ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.


ನ್ಯಾಯವಾದ ತೀರ್ಪು ಒಳ್ಳೆಯವರಿಗೆ ಸಂತೋಷ; ಕೆಡುಕರಿಗೆ ಬಹುಭಯ.


ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ, ಕೆಡುಕರನ್ನಾದರೋ ನಾಶಮಾಡುತ್ತಾನೆ.


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ. ಅವರು ಸುಲಭವಾಗಿ ಬಿದ್ದು ನಾಶವಾಗುವರು.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.


ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ.


ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.”


ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.


ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, “ಅಬ್ಷಾಲೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು