Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:6 - ಪರಿಶುದ್ದ ಬೈಬಲ್‌

6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:6
19 ತಿಳಿವುಗಳ ಹೋಲಿಕೆ  

ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.


ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. ನಾನು ಅವರನ್ನು ಕ್ಷಮಿಸಬೇಕೋ?


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ.


ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವೆ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು