Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:13 - ಪರಿಶುದ್ದ ಬೈಬಲ್‌

13 ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ, ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು [ಅವನಲ್ಲಿ] ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವದಿಲ್ಲ ಎಂದು ಅಂದುಕೊಳ್ಳಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:13
23 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.


ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.


ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದ್ದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.


ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”


ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


“ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.


ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.


“ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.


ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.


ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.


ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.


ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು