Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು, ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:6
14 ತಿಳಿವುಗಳ ಹೋಲಿಕೆ  

ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ.


ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


“ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ?


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.


‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’


ಎಲೀಹು ತನ್ನ ಮಾತನ್ನು ಮುಂದುವರಿಸಿದನು:


ಎಲೀಹು ಮಾತನ್ನು ಮುಂದುವರಿಸಿ,


ಎಲೀಹು ಮಾತನ್ನು ಮುಂದುವರಿಸಿ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು