Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:32 - ಪರಿಶುದ್ದ ಬೈಬಲ್‌

32 ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:32
18 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


“ಮನುಷ್ಯನು ದೇವರಿಗೆ, ‘ನಾನು ದೋಷಿ, ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.


ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು