Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:13 - ಪರಿಶುದ್ದ ಬೈಬಲ್‌

13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:13
20 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.


“ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


“ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನ ಕೊಡುವುದಿಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳದಿರಲಿ. ಯಾಕೆಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೇನೂ ದೊರೆಯುವುದಿಲ್ಲ.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು