Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:8 - ಪರಿಶುದ್ದ ಬೈಬಲ್‌

8 ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:8
15 ತಿಳಿವುಗಳ ಹೋಲಿಕೆ  

ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು ಆತನು (ಯೆಹೋವನು) ಆ ಕಾಯಿಲೆಯನ್ನು ನಿಲ್ಲಿಸಿದನು.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


“‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ.


“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು