Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:9 - ಪರಿಶುದ್ದ ಬೈಬಲ್‌

9 “ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:9
20 ತಿಳಿವುಗಳ ಹೋಲಿಕೆ  

ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು.


ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.


ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.


ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,


ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.


ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.


ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು