Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:18 - ಪರಿಶುದ್ದ ಬೈಬಲ್‌

18 ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:18
17 ತಿಳಿವುಗಳ ಹೋಲಿಕೆ  

ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.


ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


“ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.


ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು.


ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೋ?” ಎಂದು ಕೇಳಿದನು.


ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು