Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:21 - ಪರಿಶುದ್ದ ಬೈಬಲ್‌

21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:21
18 ತಿಳಿವುಗಳ ಹೋಲಿಕೆ  

ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.


ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.


ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು.


ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.


ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ,


ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.


ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.


ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.


“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು