Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:13 - ಪರಿಶುದ್ದ ಬೈಬಲ್‌

13 ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:13
14 ತಿಳಿವುಗಳ ಹೋಲಿಕೆ  

ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.


ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.


ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.


ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೋ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.


“ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು.


ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು