Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:6 - ಪರಿಶುದ್ದ ಬೈಬಲ್‌

6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹಿಮಕ್ಕೂ ಹದಮಳೆಗೂ ತನ್ನ ಶಕ್ತಿಯ ದೊಡ್ಡ ಮಳೆಗೂ ಭೂವಿುಯ ಮೇಲೆ ಬೀಳು ಎಂದು ಅಪ್ಪಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:6
14 ತಿಳಿವುಗಳ ಹೋಲಿಕೆ  

“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


“ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.


ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು.


ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಆದರೆ ಇಲ್ಲಿ ಹೆಚ್ಚು ಜನರು ಸೇರಿಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.


ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು