Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:11 - ಪರಿಶುದ್ದ ಬೈಬಲ್‌

11 ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಲಹೆಚ್ಚಾಗಿರುವದರಿಂದ ಅದರಲ್ಲಿ ನಂಬಿಕೆಯಿಟ್ಟು ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:11
16 ತಿಳಿವುಗಳ ಹೋಲಿಕೆ  

ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.


ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು.


ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.


ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.


ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು.


ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?


ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?


ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು