Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:19 - ಪರಿಶುದ್ದ ಬೈಬಲ್‌

19 ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:19
18 ತಿಳಿವುಗಳ ಹೋಲಿಕೆ  

ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.


ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ ನುಸಿಹಿಡಿದ ಬಟ್ಟೆಯ ಚೂರಿನಂತೆಯೂ ಕ್ಷಯಿಸಿಹೋಗುತ್ತಿದ್ದೇನೆ.”


ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.


ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು