Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:8 - ಪರಿಶುದ್ದ ಬೈಬಲ್‌

8 “ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:8
20 ತಿಳಿವುಗಳ ಹೋಲಿಕೆ  

ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.


ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.


ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!


ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.


ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.


ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.


ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ?


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು