Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:5 - ಪರಿಶುದ್ದ ಬೈಬಲ್‌

5 ಯೆಹೋವನೇ, ಮೊದಲಾದರೋ ನಾನು ನಿನ್ನ ಬಗ್ಗೆ ಕೇಳಿದ್ದೆನು; ಈಗಲಾದರೋ ಕಣ್ಣಾರೆ ನಿನ್ನನ್ನು ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:5
16 ತಿಳಿವುಗಳ ಹೋಲಿಕೆ  

ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ.


ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ.


ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.


“ಒಂದು ಸಂದೇಶವು ನನಗೆ ರಹಸ್ಯವಾಗಿ ತಿಳಿಸಲ್ಪಟ್ಟಿತು; ನನ್ನ ಕಿವಿಗಳಿಗೆ ಅದು ಗುಸುಗುಸು ಸದ್ದಾಗಿ ಕೇಳಿಬಂತು.


ನಾಶಲೋಕವೂ ಮೃತ್ಯುವೂ, ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ.


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು