Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:9 - ಪರಿಶುದ್ದ ಬೈಬಲ್‌

9 ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ ದೇಶದ ಬಿಲ್ದದನೂ ನಾಮಾಥ್ಯ ದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ತೇಮಾನ್ಯನಾದ ಎಲೀಫಜನೂ ಶೂಹ್ಯನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:9
16 ತಿಳಿವುಗಳ ಹೋಲಿಕೆ  

ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.


ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು