Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:6 - ಪರಿಶುದ್ದ ಬೈಬಲ್‌

6 ವಿಪತ್ಕಾಲಗಳು ಬರುವುದು ಧೂಳಿನಿಂದಲ್ಲ; ಕೇಡು ಬೆಳೆಯುವುದು ನೆಲದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕೇಡುಹುಟ್ಟುವುದು ಮಣ್ಣಿನಿಂದಲ್ಲ ದುಃಖ ಮೊಳೆವುದು ಭೂಮಿಯಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೇಡು ಉದ್ಭವಿಸುವದು ಮಣ್ಣಿನಿಂದಲ್ಲಾ; ಶ್ರಮೆಯು ಭೂವಿುಯಿಂದ ಮೊಳೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:6
11 ತಿಳಿವುಗಳ ಹೋಲಿಕೆ  

ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.


ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ.


ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’


ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.


ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು