Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:15 - ಪರಿಶುದ್ದ ಬೈಬಲ್‌

15 ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:15
20 ತಿಳಿವುಗಳ ಹೋಲಿಕೆ  

ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.


ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಮಂಜಿನಿಂದಲೂ ಕರಗುವ ಹಿಮದಿಂದಲೂ ತುಂಬಿ ಹರಿಯುವ ತೊರೆಗಳಂತೆ ನೀವಿದ್ದೀರಿ.


ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನುವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ಸರೋವರದಿಂದ ನೀರು ಕಾಣೆಯಾಗುವವರೆಗೂ ನದಿಯ ನೀರು ಒಣಗಿಹೋಗುವವರೆಗೂ


“ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ. ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.


ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು