Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:7 - ಪರಿಶುದ್ದ ಬೈಬಲ್‌

7 ಇಂಥಾ ಊಟವು ನನಗೆ ಅಸಹ್ಯ; ನಾನು ಅದನ್ನು ಮುಟ್ಟಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, ಅಂಥ ಆಹಾರವು ನನಗೆ ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:7
11 ತಿಳಿವುಗಳ ಹೋಲಿಕೆ  

ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.


ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.


ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಾಳಾಟವು ಜಲಧಾರೆಯಂತಿದೆ.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.


ಊಟವನ್ನು ಉಪ್ಪಿಲ್ಲದೆ ತಿನ್ನುವರೇ? ಮೊಟ್ಟೆಯ ಲೋಳೆಗೆ ರುಚಿಯಿದೆಯೇ?


“ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ? ನಾನು ಬಯಸಿದ್ದನ್ನು ದೇವರು ನನಗೆ ಕೊಡುವುದಿಲ್ಲವೇ?


ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು