Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:16 - ಪರಿಶುದ್ದ ಬೈಬಲ್‌

16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:16
22 ತಿಳಿವುಗಳ ಹೋಲಿಕೆ  

ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ.


ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು!


ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”


ಮನುಷ್ಯರು ಕೇವಲ ಉಸಿರೇ. ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.


ದೇವರೇ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.


ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.


ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು