Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:8 - ಪರಿಶುದ್ದ ಬೈಬಲ್‌

8 ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವದಿಲ್ಲ; ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:8
14 ತಿಳಿವುಗಳ ಹೋಲಿಕೆ  

ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ, ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ.


ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.


ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.


ದೇವರೇ, ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನ್ಯಾಯಾಲಯಕ್ಕೆ ಎಳೆದುಕೊಂಡು ಹೋಗುವಿಯಾ?


ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿರುವೆ. ನಾನಿಡುವ ಪ್ರತಿಯೊಂದು ಹೆಜ್ಜೆಯನ್ನು ನೀನು ಸೂಕ್ಷ್ಮವಾಗಿ ಗಮನಿಸಿ ನನ್ನ ಹೆಜ್ಜೆಗಳಿಗೆ ಮೇರೆಗಳನ್ನು ಹಾಕಿರುವೆ.


ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.


ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ದುಷ್ಟನು ಮಲಗಿಕೊಳ್ಳುವಾಗ ಐಶ್ವರ್ಯವಂತನಾಗಿದ್ದರೂ ನಿದ್ರೆಯಿಂದ ಎಚ್ಚೆತ್ತಾಗ ಅವನ ಐಶ್ವರ್ಯವೆಲ್ಲಾ ಹೊರಟುಹೋಗಿರುವುದು.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.


ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು