Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:10 - ಪರಿಶುದ್ದ ಬೈಬಲ್‌

10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:10
12 ತಿಳಿವುಗಳ ಹೋಲಿಕೆ  

ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.


ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.


‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು.


ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.


ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.


“ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು