Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:22 - ಪರಿಶುದ್ದ ಬೈಬಲ್‌

22 ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:22
17 ತಿಳಿವುಗಳ ಹೋಲಿಕೆ  

ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.


ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.’”


ಅವನು ಜೇಡರಬಲೆಯನ್ನು ಒರಗಿಕೊಳ್ಳುವನು, ಆದರೆ ಬಲೆಯು ಕಿತ್ತುಹೋಗುವುದು. ಅವನು ಜೇಡರಬಲೆಯನ್ನು ಹಿಡಿದುಕೊಳ್ಳುವನು, ಆದರೆ ಅದು ಅವನಿಗೆ ಆಧಾರ ನೀಡುವುದಿಲ್ಲ.


ಬಳಿಕ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು:


ಯಾಕೆಂದರೆ ದೇವರಿಲ್ಲದ ಜನರು ಫಲ ಕೊಡಲಾರರು. ಲಂಚಕೋರರ ಗುಡಾರಗಳು ಬೆಂಕಿಯಿಂದ ಸುಟ್ಟುಹೋಗುತ್ತವೆ.


‘ನೀತಿವಂತನ ಮನೆಯು ಎಲ್ಲಿದೆ? ದುಷ್ಟನು ವಾಸವಾಗಿರುವುದು ಎಲ್ಲಿ?’ ಎಂದು ನೀವು ಕೇಳಬಹುದು.


ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು.


ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು