Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:20 - ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:20
24 ತಿಳಿವುಗಳ ಹೋಲಿಕೆ  

‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!’


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”


“ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?


ಅದೇನೆಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿಕರ್ತನಿಗಿಂತಲೂ ಶುದ್ಧನಾಗಿರುವನೇ?


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.


ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ?


ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.


ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು