Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:23 - ಪರಿಶುದ್ದ ಬೈಬಲ್‌

23 ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವಿಪತ್ತು ಅಕಸ್ಮಾತ್ತಾಗಿ ಜನರನ್ನು ಸಂಹರಿಸಲು ನಿರ್ಮಲಚಿತ್ತರು ಮನಗುಂದುವದನ್ನು ಆತನು ನೋಡಿ ಹಾಸ್ಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:23
12 ತಿಳಿವುಗಳ ಹೋಲಿಕೆ  

ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.


ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.


ರಾಜನಾದ ನನ್ನ ಒಡೆಯನೇ, ನಾನು ಈ ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು. ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡಬಹುದು.


ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು