Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:11 - ಪರಿಶುದ್ದ ಬೈಬಲ್‌

11 ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:11
8 ತಿಳಿವುಗಳ ಹೋಲಿಕೆ  

ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.


ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.


“ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು